ಇಂದು ನಸುಕಿನ ಜಾವ ನರಗುಂದ ಬಳಿ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ದಂಪತಿಗಳ ದೇಹಗಳು ಛಿದ್ರಗೊಂಡಿವೆ.
ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ದರ್ಶನ ಮುಗಿಸಿಕೊಂಡು ಬಾಗಲಕೋಟೆಯತ್ತ ಕಾರಿನಲ್ಲಿ ಹೋಗುತ್ತಿದ್ದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಕ್ಕಳಾದ ಮಲ್ಲಿಕಾರ್ಜುನ ಮತ್ತು ಸಹನಾಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಧಾಖಲು ಮಾಡಲಾಗಿದೆ. ನರಗುಂದ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಲಾರಿ, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಸ್ಥಳಕ್ಕೆ ನರಗುಂದ ಪೋಲಿಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ
Author: Karnataka Files
Post Views: 6





