Download Our App

Follow us

Home » Uncategorized » ಕೊಪ್ಪಳದ ಮರಕುಂಬಿ ಘಟನೆ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 98 ಅಪರಾಧಿಗಳಿಗೆ ಜಾಮೀನು ಮಂಜೂರು

ಕೊಪ್ಪಳದ ಮರಕುಂಬಿ ಘಟನೆ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 98 ಅಪರಾಧಿಗಳಿಗೆ ಜಾಮೀನು ಮಂಜೂರು

ಇಡೀ ದೇಶದ ಗಮನ ಸೆಳೆದಿದ್ದ ಕೊಪ್ಪಳದ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 98 ಜನರಿಗೆ ಧಾರವಾಡ ಹೈಕೋರ್ಟ ಜಾಮೀನು ಮಂಜೂರು ಮಾಡಿದೆ. 

ದಲಿತರ ಮೇಲೆ ನಡೆದ ದೌರ್ಜನ್ಯದ ಕುರಿತು ವಿಚಾರಣೆ ನಡೆಸಿದ್ದ ಕೊಪ್ಪಳದ ಜಿಲ್ಲಾ ನ್ಯಾಯಾಲಯ, ಆರೋಪಿತರಿಗೆ ೧೪ ವರ್ಷ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. 

ಜಿಲ್ಲಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟನಲ್ಲಿ ಪ್ರಶ್ನಿಸಿದ್ದ ಆರೋಪಿತರ ಪರ ವಕೀಲ ಆನಂದ ಕೊಳ್ಳಿ, ಕಡೆಗೂ ಜಾಮೀನು ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಹಿಂದೆ ಈ ಅಪರಾಧಿಗಳು ಜಾಮೀನಿನ ಮೇಲೆ ಇದ್ದಾಗ ಯಾವುದೇ ಜಾಮೀನಿನ ಶರತ್ತುಗಳನ್ನ ಮುರಿದಿರಲಿಲ್ಲ, ಹಾಗಾಗಿ ಜಾಮೀನು ನೀಡುವಂತೆ ಹೈಕೋರ್ಟ ಗಮನಕ್ಕೆ ತರಲಾಗಿತ್ತು. ಇದೀಗ ಧಾರವಾಡ ಹೈಕೋರ್ಟನ ವಿಭಾಗೀಯ ಪೀಠ ವಿಚಾರಣೆ ನಡೆಸಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಎಲ್ಲರಿಗೂ ಜಾಮೀನು ಮಂಜೂರು ಮಾಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!