ತಂದೆ ಬಿ ಎಸ್ ಯಡಿಯೂರಪ್ಪನವರ ಬಗ್ಗೆ ಮಾತನಾಡಿರುವ ಶಾಸಕ ರಮೇಶ ಜಾರಕಿಹೊಳಿ ಮೇಲೆ ಗರಂ ಆಗಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು ರಮೇಶ ಜಾರಕಿಹೊಳಿ ಎಚ್ಚರಿಕೆಯಿಂದ, ಬಾಯಿ ಹಿಡಿತದಲ್ಲಿಟ್ಟುಕೊಂಡು ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದಾರೆ.
ಈಚೆಗಷ್ಟೇ ಬಿಜೆಪಿಗೆ ಬಂದಿರುವ ರಮೇಶ ಜಾರಕಿಹೊಳಿಗೆ ಎದುರೇಟು ನೀಡಿರುವ ಬೈ ವಿ ವಿಜಯೇಂದ್ರ ವೈಲೆಂಟ್ ಆಗಿದ್ದಾರೆ.
ಹಳ್ಳಿ ಹಳ್ಳಿಗಳಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಕಟ್ಟಿರುವ ಬಿ ಎಸ್ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ, ರಮೇಶ ಜಾರಕಿಹೊಳಿ ಓಡಾಡುವದು ಕಷ್ಟ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Author: Karnataka Files
Post Views: 10





