ರಾಜ್ಯದಲ್ಲಿ ಬಿಜೆಪಿ ದಯನೀಯ ಸ್ಥಿತಿಗೆ ತಲುಪಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ ಹೇಳಿದ್ದಾರೆ. ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ ಅವರು ಮೂರು ತಿಂಗಳಾಗುತ್ತಾ ಬಂದರು ಸಹ ವಿರೋದ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದ್ದು, ದಿನದಿಂದ ದಿನಕ್ಕೆ ತನ್ನ ಆಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಪಕ್ಷದ ಸಂಘಟನೆ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಜೊತೆ ಮೂರು ಘಂಟೆಗಳ ಕಾಲ ಚರ್ಚೆ ಮಾಡಿದ್ದೇನೆ ಎಂದು ಜಗದೀಶ ಶೆಟ್ಟರ ತಿಳಿಸಿದರು. ಲೋಕಸಭೆಯಲ್ಲಿ 15 ರಿಂದ 20 ಸ್ಥಾನಗಳನ್ನು ಗೆಲ್ಲೋದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶೆಟ್ಟರ ಹೇಳಿದ್ದಾರೆ.
Author: Karnataka Files
Post Views: 3





